ಸುಳ್ಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುವ ಗ್ರಂಥಾಲಯ ಮೇಲ್ವಿಚಾರಕರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಸುಮಾರು 6 ಸಾವಿರಕ್ಕಿಂತಲೂ ಹೆಚ್ಚು ಇದ್ದು ಕಡಿಮೆ ವೇತನದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ, ದಶಕಗಳಿಂದ ವೇತನ ಹೆಚ್ಚಳ ಹಾಗೂ ಕನಿಷ್ಟ ವೇತನ ಪಾವತಿ ಮತ್ತು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹಲವಾರು ಹೋರಾಟ, ಪ್ರತಿಭಟನೆ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ನೊಂದು ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣಕುಮಾರರಿಗೆ ತಕ್ಷಣ ಸರಕಾರ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ವೆಂಕಪ್ಪ ಹಾಗೂ ತಾಲೂಕು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel