ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

November 29, 2019
3:09 PM

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜವನ್ನು ಅರಿತುಕೊಳ್ಳಲು ಹಾಗೆಯೇ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನು ರೂಪಿಸಲು ಇದು ಸಹಕಾರಿಯಾಗುತ್ತದೆ. ನಾವು ನಾಲ್ಕು ಗೋಡೆಗಳಿಂದ ಹೊರಬಂದು ಸಮಾಜದಲ್ಲಿ ಬೆರೆಯುವಂತೆ ಮಾಡುತ್ತಾ ಜೀವನ ದರ್ಶನವನ್ನು ನೀಡುತ್ತದೆ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಅಭಿಪ್ರಾಯಪಟ್ಟರು.

Advertisement
Advertisement

ಅವರು ಮಂಗಳೂರು ವಿವಿ, ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನ ಸಾಜ ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಇತ್ತೀಚೆಗೆ ಮಾತನಾಡಿದರು. ವಿದ್ಯಾರ್ಥಿಗಳು ವರ್ಷಕ್ಕೊಮ್ಮೆ ಇಂತಹ ಶಿಬಿರದಲ್ಲಿ ಸೇರುವುದರಿಂದ ಸಮಾಜಸೇವೆ ಎಂದರೇನು ಹಾಗೂ ಪ್ರತಿಯೊಬ್ಬ ನಾಗರಿಕನ ಪಾತ್ರ ಎಂತಹದ್ದು ಎಂಬುದನ್ನು ಇಲ್ಲಿ ಕಲಿಯಲು ಸಾಧ್ಯ. ಅದೇ ರೀತಿ ಇಲ್ಲಿ ಸಿಗುವ ಅನುಭವ ಜೀವನಕ್ಕೆ ಬೇಕಾದ ಪಾಠವನ್ನು ಕಲಿಸುತ್ತದೆ ಎಂದು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನನುಕೂಲತೆ ಇರುವಲ್ಲಿ ಪ್ರತಿಭೆಗಳು ಬೆಳಗುತ್ತವೆ. ಅದಕ್ಕೆ ವೇದಿಕೆಯನ್ನು ನೀಡುತ್ತಿರುವುದು ಎನ್‍ಎಸ್‍ಎಸ್ ಆಗಿದೆ. ಇದರಿಂದ ಅನೇಕ ಯುವ ಮನಸ್ಸುಗಳು ಕ್ರಿಯಾಶೀಲಗೊಂಡು ಮತ್ತಷ್ಟು ಪ್ರಜ್ವಲಿಸುವಂತಾಗಬೇಕು ಇದಕ್ಕೆ ಇಂತಹ ಶಿಬಿರಗಳನ್ನು ಸರಿಯಾಗಿ ಸದುಪಯೋಗಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಭಂಡಾರಿ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಆಶಯದ ಮಾತುಗಳನ್ನಾಡಿದರು. ತಾಲೂಕು ಪಂಚಾಯತ್ ಸದಸ್ಯೆ ದಿವ್ಯ ಪುರುಷೋತ್ತಮ, ಬಲ್ನಾಡುಗ್ರಾಮ ಪಂಚಾಯತ್ ಅಧ್ಯಕ್ಷೆ ವಿನಯ, ತಾಲೂಕು ಪಂಚಾಯತ್‍ನ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಾಲಾ ಮುಖ್ಯಗುರು ಅನ್ನಪೂರ್ಣೇಶ್ವರಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಅನುರಾಧಾ ನಾಯ್ಕ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ಸ್ವಾಗತಿಸಿದರು. ದೀಕ್ಷಿತ್ ಬಂದಾಜೆ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿದ್ಯಾ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror