ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

December 14, 2019
9:05 AM

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಎ. ಪಿ. ಭಟ್, ಗ್ರಹಣವು ಒಂದು ಬಾಹ್ಯಕಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ , ಒಂದು ಬಗೆಯ ಸಂಯೋಗದ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವು ವೇಳೆ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಎಂದು ವಿವರಿಸಲು ಬಳಸಲಾಗುತ್ತದೆ. ಇಂತಹ ಪ್ರಾಕೃತಿಕ ವಿದ್ಯಾಮಾನಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತುಕೊಳ್ಳಬೇಕು ಎಂದರು.

ಜೀವನಚಕ್ರದಲ್ಲಿ ಸಂಶೋಧನೆಯ ಕ್ಷಣಗಳು ಬಹಳ ಮುಖ್ಯ ಅದು ಮುಗಿಯದ ಕಲಿಕೆ. ಯುವಜನಾಂಗ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಅನುಮಾನಗಳನ್ನು ಸ್ವ ಪ್ರಯೋಗಗಳ ಮೂಲಕ ಪರಿಹರಿಸಿಕೊಳ್ಳುವ ಪ್ರವೃತ್ತಿ ಯುವಜನಾಂಗದಲ್ಲಿ ಬೆಳೆಯಬೇಕು. ವಿಜ್ಞಾನ ಎಂಬುದು ಸಾಗರವಿದ್ದಂತೆ. ಓದಿದಷ್ಟು ಮುಗಿಯದ ಪುಸ್ತಕವಿದ್ದಂತೆ. ನಮ್ಮ ಜ್ಞಾನವನ್ನು ವಿಜ್ಞಾನವೆಂಬ ಮಹಾನ್ ಸಾಗರಕ್ಕೆ ವಿಸ್ತರಿಸಬೇಕು. ಹೊಸತನ್ನು ಅನ್ವೇಷಿಸುವುದು ನಮ್ಮ ಹವ್ಯಾಸವಾಗಬೇಕು ಎಂದರು. ಬಳಿಕ ಗ್ರಹಣ ನಡೆಯುವ ಬಗೆ ಮತ್ತು ಮುನ್ನೆಚ್ಚರಿಸಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಉಪನ್ಯಾಸಕಿ ದಯಾಮಣಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಭಾಗವಹಿಸಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror