ವಿಶಾಖಾಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ | ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

May 9, 2020
4:47 PM

ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ತಿಳಿಸಿದ್ದಾರೆ.

Advertisement

ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್‌ ನಲ್ಲಿ ಘಟಿಸಿದೆ.  ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.  ‘ಭೋಪಾಲ್ ಅನಿಲ ದುರಂತ’ದ ದೋಷಿಗಳಿಗೆ ಶಿಕ್ಷೆಯಾಗದ ಕಾರಣ ಅದರಲ್ಲಿ ಮೃತಪಟ್ಟ 20 ಸಾವಿರ ಜನರಿಗೆ ಹಾಗೂ ಸ್ಥಳಾಂತಗೊಂಡಿದ್ದ 5 ಲಕ್ಷ  ಜನರಿಗೆ ಇದುವರೆಗೂ ನಿಜವಾದ ನ್ಯಾಯ ದೊರಕಿಲ್ಲ. ಇದೇ ಪರಿಸ್ಥಿತಿ ಪುನಃ ಉದ್ಭವಿಸಬಾರದೆಂದು ಸರಕಾರವು ವಿಶಾಖಾಪಟ್ಟಣಮ್‌ ನಲ್ಲಿ ದೋಷಿಗಳ ಮೇಲೆ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇಂತಹ ಪರಿಸ್ಥಿತಿಯು ದೇಶದ ಇತರೆಡೆ ಉದ್ಭವಿಸಬಾರದೆಂದು ಘಾತಕ- ವಿಷಾನಿಲ ಬಳಸುವ ಯೋಜನೆಗಳನ್ನು ತಕ್ಷಣವೇ ಪರಿಶೀಲಿಸಿ ಅದರ ಸಮೀಕ್ಷೆ ನಡೆಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಹಾಗೂ ಕೇಂದ್ರ ಸರಕಾರವನ್ನುಆಗ್ರಹಿಸಿದೆ.

ಅನಿಲ ಸೋರಿಕೆಯಾಗಲು ಸಂಬಂಧಪಟ್ಟ ಕಂಪನಿಯಷ್ಟೇ ಅಲ್ಲದೇ ಅಲ್ಲಿ ಸುರಕ್ಷತೆಯನ್ನು ಕಠಿಣವಾಗಿ ಪಾಲಿಸದಿರುವ ಪರಿಸರ ಇಲಾಖೆ ಹಾಗೂ ಇತರ ಸಂಬಂಧಿತ ಸರಕಾರಿ ಇಲಾಖೆಗಳು ಜವಾಬ್ದಾರವಾಗಿವೆ. ಆದುದರಿಂದ ದೋಷಿ ಕಂಪನಿಗಳೊಂದಿಗೆ ಸರಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆಯೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror