ವಿಶ್ವ ಆಹಾರ ಸುರಕ್ಷಾ ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ

June 12, 2019
12:30 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ‘ವಿಶ್ವ ಆಹಾರ ಸುರಕ್ಷಾ ದಿನದ’ ಅಂಗವಾಗಿ ನಡೆದ ನಾಲ್ಕು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್ ಸತೀಶ್ಚಂದ್ರ  ವಹಿಸಿ  “ವೈಯುಕ್ತಿಕವಾಗಿ ವ್ಯಕ್ತಿ ಬೆಳೆದಾಗ ಸಮಾಜವು ಕೂಡಾ ಬೆಳೆಯುತ್ತದೆ”,” ಕೆಲವೊಂದು ವಿಶೇಷ ಕಲೆಗಳು ಅನುವಂಶೀಯವಾಗಿ ಕೊಡುಗೆಯಾಗಿ ಬಂದಿದೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಂತಹ ವಿಶೇಷ ಶಕ್ತಿಯಿದ್ದು ಅದನ್ನು ಹೊರತರುವ ಪ್ರಯತ್ನ ನಡೆಯಬೇಕು” ಎಂದು ಹೇಳಿದರು.

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ  ಸುರೇಶ್ ಭಂಡಾರಿ ಮಾತಾಡಿ ” ಹೊಸತನವನ್ನು ಅಳವಡಿಸಿಕೊಳ್ಳುವ ಮೂಲಕ ಫ್ಯಾಕ್ಟರಿಯನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಿದ್ದು ಎಲ್ಲರೂ ಸಮರ್ಪಣಾ ಭಾವದಿಂದ ಕೊಡುಗೆ ನೀಡಿದಾಗ ಇದು ಸಾಧ್ಯ ಎಂದರು .

ನೆಸ್ಲೆ ಘಟಕದ ಮುಖ್ಯಸ್ಥರಾದ ಪ್ರದೀಪ್ ವಲ್ಸಲಾ ,ಕ್ಯಾಂಪ್ಕೋ ಉತ್ಪದನಾ ಘಟಕದ ಎ.ಜಿ.ಮ್ ಅನೂಪ್ ,ತಾಂತ್ರಿಕ ಎ.ಜಿ.ಎಮ್ ಶ್ಯಾಮ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ರಾಧೇಶ್ ಕುಂದಲ್ಪಾಡಿ ಸ್ವಾಗತಿಸಿ,  ಜೀವನದಾಸ್ ರೈ ವಂದಿಸಿದರು, ಶ್ರೀನಿವಾಸ ಕುಂಜತ್ತಾಯ ,ರಾಜೇಶ್ , ಪ್ರಶಾಂತ್ ಡಿ.ಎಸ್,ಪಿ.ಪಿ ಜೈನ್, ಪ್ರಮೋದ್ ಕೆ .ಯು ಗುಂಪು ಚಟುವಟಿಕೆಗಳನ್ನು ನಡೆಸಿಕೊಟ್ಟರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror