ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

June 9, 2019
8:58 PM

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

Advertisement
Advertisement

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group