ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

September 12, 2019
9:00 AM

ಮಂಗಳೂರು: ನಗರದಲ್ಲಿದ್ದರೂ, ಗ್ರಾಮೀಣದಲ್ಲಿದ್ದರೂ ತರಕಾರಿ ಹಾಗೂ ಆಹಾರವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಇವುಗಳಿಗೆ ಮೂಲ ಆಧಾರವಾಗಿರುವುದು ಕೃಷಿ. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯು ಮಾಯವಾಗಿ ನಗರದ ವಿಸ್ತೀರ್ಣ ಹೆಚ್ಚಾಗಿರುವಂತೆಯೇ ಉತ್ತಮ ಜೀವನ ಮಟ್ಟವನ್ನು ನಿರೀಕ್ಷಿಸಿ ಯುವ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

Advertisement

ಇತ್ತೀಚಿನ ದಿನಗಳಲ್ಲಿ ತರಕಾರಿಗೆ ಹೆಚ್ಚಿನ ಬೇಡಿಕೆ, ಉತ್ತಮ ಬೆಲೆ ಸಿಗುವುದರಿಂದ ರೈತರು ಹೆಚ್ಚು ಇಳುವರಿ ನೀಡುವ ಸುಧಾರಿತ ಮತ್ತು ಹೈಬ್ರಿಡ್ ತಳಿಗಳನ್ನು ಬೆಳೆಸುತ್ತಿದ್ದಾರೆ. ಈ ತಳಿಗಳು ಶೀಘ್ರವಾಗಿ ಕೀಟ-ರೋಗಕ್ಕೆ ತುತ್ತಾಗುವುದರಿಂದ ನಿವಾರಣೆಗೆ ಅಧಿಕ ಪ್ರಮಾಣದಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಜನರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಗರವಾಸಿಗಳು ಸ್ವಯಂಪ್ರೇರಿತವಾಗಿ ಸಾಧ್ಯವಾದ ಎಲ್ಲಾ ರೀತಿಯ ತರಕಾರಿ ಮತ್ತು ಇತರೆ ಬೆಳೆಗಳನ್ನು ಬೆಳೆಯುವುದೇ ಇದಕ್ಕೆಲ್ಲಾ ಇರುವ ಪರಿಹಾರ.
ಒಂದು ಕುಟುಂಬಕ್ಕೆ ಬೇಕಾಗುವ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ಪಡೆಯಲು ತಮ್ಮ ಮನೆಯ ಆವರಣ-ಹಿತ್ತಲಲ್ಲಿ ಬೆಳೆಸುವ ತೋಟವನ್ನು ಕೈತೋಟ ಎಂದು ಕರೆಯುತ್ತೇವೆ.

ಕೈತೋಟ ಮಾಡಲು ಸ್ಥಳ ಇಲ್ಲದೇ ಇರುವ ಪಕ್ಷದಲ್ಲಿ ಮನೆಯ ತಾರಸಿ ಮೇಲೆ ಕುಂಡಗಳಲ್ಲಿ, ಗ್ರೋಬ್ಯಾಗ್‍ಗಳಲ್ಲಿ ಸುಲಭವಾಗಿ ತರಕಾರಿ ಹಣ್ಣುಗಳನ್ನು ಬೆಳೆಯುವುದೇ ತಾರಸಿ ತೋಟ.

ತಾರಸಿ ತೋಟದ ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬುವ ಮಿಶ್ರಣ ತಯಾರಿಸುವ ವಿಧಾನ ಈ ಕೆಳಕಂಡಿರುತ್ತದೆ. ಮಣ್ಣು, ಮರಳು ಅಥವಾ ಕೋಕೋಪಿಟ್ ಮತ್ತು ಕಾಂಪೋಸ್ಟ್-ಬಯೋಮಿಕ್ಸ್ ಅನ್ನು 1:1:1 ಪ್ರಮಾಣದಲ್ಲಿ ಬೆರೆಸಿ ಮಿಶ್ರಣ ಮಾಡಿಕೊಳ್ಳುವುದು. ಈ ಮಿಶ್ರಣವನ್ನು ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬಿಸಿ ಬೀಜಗಳನ್ನು ಅಥವಾ ಸಸಿಗಳನ್ನು ನಾಟಿ ಮಾಡಿ, ದಿನಾಲೂ ನೀರು ಹಾಕುವುದು. ಬಳ್ಳಿಗಳು ಇರುವ ತರಕಾರಿಗೆ ಚೆನ್ನಾಗಿ ಹರಡಿಕೊಳ್ಳಲು ಆಧಾರಕೋಲು ಕೊಡುವುದು.

ಕೈತೋಟ ಮತ್ತು ತಾರಸಿ ತೋಟ ಬೆಳೆಸುವಾಗ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಮಹತ್ವನ್ನು ನೀಡಿ ಹಾನಿಕಾರಕ ರಾಸಾಯನಿಕಗಳನ್ನು ಬಳಸದೇ ತೋಟವನ್ನು ಮಾಡಬೇಕಾಗುವುದು.
ಮುಖ್ಯವಾಗಿ ತರಕಾರಿ ಬೆಳೆಯುವಾಗ ಗಮನದಲ್ಲಿ ಇರಬೇಕಾದ ಅಂಶಗಳೇನೆಂದರೆ ಗಿಡಗಳಿಗೆ ಅಗತ್ಯಕ್ಕಿಂತ ಜಾಸ್ತಿ ನೀರು ಕೊಡಬಾರದು, ಗಿಡಗಳಿಗೆ ಸಾಧ್ಯವಾದಷ್ಟು ಬಿಸಿಲು ಬೀಳುವಂತೆ ನೋಡಿಕೊಳ್ಳಬೇಕು, ತರಕಾರಿ ಗಿಡಗಳಲ್ಲಿ ರೋಗದ ಲಕ್ಷಣ ಪ್ರಥಮ ಬಾರಿಗೆ ಕಂಡ ಕೂಡಲೇ ಅದನ್ನು ಅಲ್ಲಿಂದ ದೂರಕ್ಕೆ ಸ್ಥಳಾಂತರಿಸಬೇಕು ಹಾಗೂ ಬೇವಿನ ಸತ್ವದ ದ್ರಾವಣವನ್ನು ಬಳಸಿ ಪೀಡೆ ನಿವಾರಣೆಗೆ ಆದ್ಯತೆ ನೀಡಬೇಕು.

Advertisement

ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್ ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group