ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ

September 15, 2019
10:30 AM

ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.

Advertisement

ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್‍ರೆಡ್‍ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್‍ರೆಡ್‍ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group