ಶಂಕು ಹುಳುಗಳು – ನಿರ್ವಹಣೆ ಕ್ರಮ

August 13, 2020
6:53 PM

ಮಂಗಳೂರು : ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ ಮಾಡುತ್ತವೆ. ಕೆಲವೊಮ್ಮೆ ತುಂತುರು ಮಳೆ ಹಾಗೂ ಮಂದ ಸೂರ್ಯನ ಪ್ರಕಾಶದಲ್ಲಿ ಹಗಲಿನ ವೇಳೆಯಲ್ಲೂ ಇವುಗಳ ಬಾಧೆಯನ್ನು ಕಾಣಬಹುದು.

ನಿರ್ವಹಣೆ ಕ್ರಮ : ತೋಟದಲ್ಲಿ ಕಳೆಗಿಡಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡುವುದು. ಪ್ರಾರಂಭದ ಹಂತಗಳಲ್ಲಿ ಹುಳುಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಸುಣ್ಣ ಸಿಂಪಡಿಸುವುದರಿಂದ ನಾಶಪಡಿಸಬಹುದು. ಹಸಿ ಗೋಣಿ ಚೀಲಗಳನ್ನು ತೋಟದಲ್ಲಿ ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಹೀಗೆ ಸಂಗ್ರಹಿಸಿದ ಹುಳುಗಳನ್ನು ಉಪ್ಪು ಅಥವಾ ಕಾಪರ್ ಸಲ್ಫೇಟ್ ಹಾಕಿ ನಾಶಪಡಿಸಬಹುದು.

ರಾಸಾಯನಿಕವಾಗಿ : ಮೆಟಾಲ್ಡಿಹೈಡ್ ರಾಸಾಯನಿಕ ಪೀಡೆನಾಶಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಆಕರ್ಷಣೆಗೊಂಡು ಕೀಟನಾಶಕಗಳನ್ನು ತಿನ್ನುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.
ವಿಶೇಷ ಸೂಚನೆ : ಯಾವುದೇ ರಾಸಾಯನಿಕದಿಂದ ಈ ಹುಳುಗಳು ಸತ್ತಿದ್ದು ಕಂಡುಬಂದಲ್ಲಿ ತಕ್ಷಣ ಅವುಗಳನ್ನು ಆರಿಸಿ ಆಳವಾಗಿ ನೆಲದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕು ಪ್ರಾಣಿಗಳು ಹೀಗೆ ಸತ್ತಿರುವ ಶಂಕುಹುಳುಗಳನ್ನು ತಿನ್ನುವುದರಿಂದ ಅವುಗಳಿಗೆ ತೊಂದರೆಯಾಗಬಹುದು. ಶಂಕುಹುಳಗಳು ನಿಸರ್ಗದಲ್ಲಿ ಶೇ.75 ರಿಂದ 80 ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದಲ್ಲಿ ಸಮತೋಲನವನ್ನು ಕಾಪಾಡುತ್ತವೆ. ಇಂತಹ ಸಂದರ್ಭದಲ್ಲಿ ಬೆಳೆಗಳ ಮೇಲೆ ಹಾವಳಿಯಿದ್ದಾಗಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನವನ್ನು ಕಾಪಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಿಶಲ್ ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror