ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

November 14, 2019
11:38 AM

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

Advertisement
Advertisement

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group