ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

November 14, 2019
11:38 AM

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

Advertisement
Advertisement

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

Advertisement

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

Advertisement

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror