ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

July 6, 2019
9:30 AM

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror