ಶಿರಾಡಿಯಲ್ಲಿ ಕಾರು ಅಪಘಾತ : ಒರ್ವ ಸಾವು

May 7, 2019
8:21 PM

ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಕಾರು ಉರುಳಿ ಕಂದಕಕ್ಕೆ ಬಿದ್ದು, ಬೆಂಗಳೂರು ನಿವಾಸಿ ಸುನಿಲ್ ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement

ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group