ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ : 9916 ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಸ್ವಯಂಸೇವಕರು

August 22, 2019
10:01 AM

ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಯಂಸೇವಕರಿಂದ ನಡೆಯಿತು. ಈ ಸ್ವಚ್ಛತಾ ಕಾರ್ಯ ನಿರಂತರವಾಗಿ ಭಕ್ತರಿಂದಲೂ ನಡೆಯಲಿ, ನಡೆಯಬೇಕು….

Advertisement
Advertisement
Advertisement
Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಆ. 8 ರಿಂದ 15 ರ ವರೆಗೆ ರಾಜ್ಯದೆಲ್ಲೆಡೆ 9916 ಶ್ರದ್ಧಾ ಕೇಂದ್ರಗಳಲ್ಲಿ ನಡೆದ ಸ್ಚಚ್ಛತಾ ಅಭಿಯಾನದಲ್ಲಿ 3,56,840 ಸ್ವಯಂ ಸೇವಕರು ಭಾಗವಹಿಸಿ ಅಭಿಯಾನ ಯಶಸ್ವಿಗೊಳಿಸಿದರು.

Advertisement

ಈ ಬಗ್ಗೆ ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಸ್ವಚ್ಛತಾ ಅಭಿಯಾನದಲ್ಲಿ 9476 ದೇವಸ್ಥಾನಗಳು, 15 ಬಸದಿಗಳು, 37 ಚರ್ಚ್‍ಗಳು, 184 ಮಸೀದಿಗಳು ಹಾಗೂ 204 ಇತರ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾಸರಗೋಡು ಸೇರಿದಂತೆ ರಾಜ್ಯದ ಒಟ್ಟು 31 ಜಿಲ್ಲೆಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಲಾಗಿದೆ.


ಬೆಳಗಾವಿ ಜಿಲ್ಲೆಯಲ್ಲಿಅತಿ ಹೆಚ್ಚು (1020) ಶ್ರದ್ಧಾಕೇಂದ್ರಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಿದ್ದು ಗರಿಷ್ಠ ಸಂಖ್ಯೆಯಲ್ಲಿ (34,543) ಸ್ವಯಂ ಸೇವಕರು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 2017 ರಿಂದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿದ್ದು ಪ್ರತಿವರ್ಷ ಆ. 8 ರಿಂದ 15 ರ ವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾಅಭಿಯಾನ ನಡೆಸಲಾಗುತ್ತದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror