ಶ್ರೀ ಚೆನ್ನಕೇಶವ ಪ್ರವಾಸಿ ತಂಡದಿಂದ ಕಾಶಿ ಕ್ಷೇತ್ರಯಾತ್ರೆ

October 24, 2019
3:41 PM

ಸುಳ್ಯ : ಶ್ರೀ ಚೆನ್ನಕೇಶವ ಪ್ರವಾಸಿ ತಂಡದಿಂದ ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡ ನೇತೃತ್ವದಲ್ಲಿ 23 ಮಂದಿ ಕಾಶಿ, ಪ್ರಯಾಗ, ಗಯ, ಬೋದಗಯಾ ಇನ್ನಿತರ ಸ್ಥಳಗಳಿಗೆ ಪ್ರವಾಸ ನಡೆಸಿತು.

Advertisement

ಮಂಗಳೂರಿನಿಂದ , ಮುಂಬೈ ಮೂಲಕ ವಾರಣಾಸಿಗೆ ವಿಮಾನ ಪ್ರಯಾಣ ತೆರಳಿ ಅಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿತು. ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಕಾಲಬೈರವೇಶ್ವರ , ಕಾಶಿ ವಿಶ್ವನಾಥ ದೇವಸ್ಥಾನ, ಕಾಶಿ ವಿಶಾಲಾಕ್ಷಿ, ಹರಿಶ್ಚಂದ್ರ ಘಾಟ್, ಬಿಂದು ಮಾಧವ ದೇವಸ್ಥಾನ, ತುಳಸಿ ಮಾನಸ ಮಂದಿರ, ಸಂಕಟ ಮೋಚನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಬಳಿಕ ಗಂಗಾರತಿ ವೀಕ್ಷಿಸಲಾಯಿತು.

ಮರುದಿನ ಪ್ರಯಾಗರಾಜ್ (ಅಲಹಾಬಾದ್)ಗೆ ತೆರಳಿ ಅಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಬಡಾ ಹನುಮಾನ್ ದೇವರ ದರ್ಶನ ಮಾಡಲಾಯಿತು.
ಮೂರನೇ ದಿನ ಬಿಹಾರದ ಬುದ್ದಗಯಾಕ್ಕೆ ತೆರಳಿ ಬುದ್ದ ನಿಗೆ ಜ್ಞಾನೋದಯ ಆದ ಪ್ರಸಿದ್ಧ ಸ್ಥಳ ಮಹಾಬೋದಿ ದೇವಸ್ಥಾನ, ಅಶೋಕ ಸ್ತಂಭ, ಬೋದಿವೃಕ್ಷ ಮೊದಲಾದ ಸ್ಥಳವನ್ನು ಸಂದರ್ಶಿಸಲಾಯಿತು. ಅಲ್ಲಿಯೇ ಬಳಿಯಲ್ಲಿದ್ದ 25 ಮೀಟರ್ ಎತ್ತರದ ಮಹಾ ಬುದ್ದನ ವಿಗ್ರಹವನ್ನು ವೀಕ್ಷಿಸಲಾಯಿತು.

ನಾಲ್ಕನೇ ದಿನ ಗಯಾಕ್ಕೆ ತೆರಳಿ ಅಲ್ಲಿ ವಿಷ್ಣುಪಾದ ದೇವಸ್ಥಾನ, ಅಕ್ಷಯ ವಟ, ಸರಯೂ ನದಿಯನ್ನು ದರ್ಶಿಸಲಾಯಿತು. ಗಯಾದಿಂದ ಕಲ್ಕತ್ತಾ ಮತ್ತು ಅಲ್ಲಿಂದ ಬೆಂಗಳೂರಿಗೆ ವಾಯುಯಾನ ಮೂಲಕ ತಲುಪಿ ಆನಂತರ ಬಸ್ಸಿನ ಮೂಲಕ ಸುಳ್ಯಕ್ಕೆ ಹಿಂತಿರುಗಲಾಯಿತು.

ಪ್ರವಾಸಿ ತಂಡದಲ್ಲಿ ಎಂ.ಮೀನಾಕ್ಷಿ ಗೌಡ, ಶೋಭಾ ಚಿದಾನಂದ, ಡಾ|ಹರಪ್ರಸಾದ್ ತುದಿಯಡ್ಕ, ಶಶಿಕಲಾ ಹರಪ್ರಸಾದ್, ಡಾ|ರೇವತಿ ನಂದನ್, ಕೆ.ಬಿ.ರಾಮಚಂದ್ರ, ಭವಾನಿ, ರಘುರಾಮ ಕೆ,ಬಿ., ಪದ್ಮಾವತಿ, ಕುಶಾಲಪ್ಪ ಗೌಡ ಕಾರಿಂಜ, ಪುಷ್ಪಾವತಿ, ದಿನಕರ ಕೆ.ಬಿ., ಶೀಲಾ ದಿನಕರ್, ಎಂ.ವಿ.ಗಿರಿಜಾ, ವೆಂಕಟ್ರಮಣ ಗೌಡ ಹುಲಿಮನೆ, ರಾಜಮ್ಮ, ಡಾ|ವೀಣಾ ವಿಜಯಕುಮಾರ್ ಮೈಸೂರು, ಗೀತಾ ಬೆಂಗಳೂರು, ಅರುಣ ಬೆಂಗಳೂರು, ದಾಮೋದರ ಕುಂದಲ್ಪಾಡಿ, ಲೀಲಾ ದಾಮೋದರ್, ಗಂಗಾಧರ ಮಟ್ಟಿ, ಚಿತ್ರಾ ಮಟ್ಟಿ ಪಾಲ್ಗೊಂಡಿದ್ದರು.
ಕಳೆದ ವರ್ಷ ಈ ತಂಡ ವೈಷ್ಣೋವದೇವಿ, ಅಮೃತಸರ್, ವಾಘಾಬಾರ್ಡರ್ ಪ್ರವಾಸ ಕೈಗೊಂಡಿತ್ತು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group