ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

March 2, 2020
10:47 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror