ಸಂತ್ರಸ್ತ ಗೋವುಗಳಿಗೆ ರಾಮಚಂದ್ರಾಪುರ ಮಠದ ಗೋಶಾಲೆಗಳಲ್ಲಿ ಉಚಿತ ಪಾಲನೆ

August 16, 2019
8:03 PM

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.

Advertisement

ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.

Advertisement

ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror