ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ನೆನಪಲ್ಲಿ ರಕ್ತದಾನ ಶಿಬಿರ

June 1, 2019
3:48 PM

ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ  ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.

Advertisement
Advertisement

ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ  ಶಿವಕುಮಾರ್,  ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.

ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್  ಶುಭಕೋರಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group