ಸಂಬಂಧ

September 2, 2019
1:00 PM
ಒಣಗಿ ಹೋದ ಮರದ ಮೇಲೆ
ಕುಳಿತ ಪಕ್ಷಿಗೆ ಕಾಡುತ್ತಿದೆ ಚಿಂತೆ
ವಸಂತ ಮಾಸದಲ್ಲೂ ಮರದಲ್ಲಿ
ಚಿಗುರಿಲ್ಲವೆಂದು…
ಅದು ಬಯಸುತ್ತಿದೆ
ಹೂವಿನ ಘಮ,ಹಣ್ಣಿನ ಸ್ವಾದ
ಮತ್ತೆ ಬೇಕೆಂದು
ಅತ್ತು ಕರೆಯುತ್ತಿದೆ ಮಳೆರಾಯನ
ಬಂದು ಚಿಗುರಿಸಬಾರದೇ ಮರವನ್ನ?
ಆದರೆ ಪಕ್ಷಿಗೇನು ಗೊತ್ತು?
ಮರ ಸಾಯಲೆಂದು
ಬೇರಿಗೆ ವಿಷವುಣಿಸಿದ ಮನುಜನ ಮರ್ಮ!
ನೆರಳನುಣಿಸಿದ ಮರಕ್ಕೂ
ಗೊತ್ತಿಲ್ಲ ತಾನುಂಡಿದ್ದು ವಿಷವೆಂದು
ಸತ್ತ ಮರವೂ ಕಣ್ಣೀರಿಡುತ್ತಿದೆ
ಬಾರದ ಮಳೆಯ ಶಪಿಸುತ್ತಿದೆ
ಮರದ ಆಶ್ರಯ ಮರೆಯದ
ಪಕ್ಷಿ ಮತ್ತೆ ಹಾಡಲಾರಂಭಿಸಿದೆ
ಮರದ ನೋವ ಮರೆಸಲೆಂದು
ಎಂದೆಂದೂ ಜೊತೆ ನಾನಿರುವೆನೆಂದು…!
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ
October 8, 2025
7:25 AM
by: ಜಯಲಕ್ಷ್ಮಿ ದಾಮ್ಲೆ
ಹೊಸರುಚಿ | ಹಲಸಿನ ಬೀಜದ ರೊಟ್ಟಿ
October 4, 2025
10:26 AM
by: ದಿವ್ಯ ಮಹೇಶ್
ವ್ಯಕ್ತಿ ಮತ್ತು ವ್ಯಕ್ತಿತ್ವ
October 3, 2025
3:19 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group