ಸಂಸದರ ಬೇಡಿಕೆಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿಯ ಪ್ರಸ್ತಾಪವಿಲ್ಲ : ನಿರಾಸೆ ವ್ಯಕ್ತಪಡಿಸಿದ ಕ್ರಿಯಾ ಸಮಿತಿ

June 28, 2019
7:02 AM

ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.

ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.

ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror