ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

January 17, 2020
7:00 PM

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group