ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ, ಉಳ್ಳಾಲ್ತಿ ನೇಮ

February 9, 2020
9:49 PM

ಸವಣೂರು : ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ.7 ಮತ್ತು 8ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

Advertisement
Advertisement

ಫೆ.7ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮದ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ ನಡೆಯಿತು. ಮದ್ಯಾಹ್ನ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರ ಮನೆಯವರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪಾರಾಧನೆ, ತಾಯಂಬಕ ಸೇವೆ, ಮಹಾಪೂಜೆ, ಶ್ರೀ ದೇವರ ಬಲಿಹೊರಟು ಉತ್ಸವ, ಶ್ರೀ ಭೂತಬಲಿ, ವಸಂತ ಕಟ್ಟೆಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು.

ಫೆ.8ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆಯಿತು. ಮದ್ಯಾಹ್ನ ಸವಣೂರು ಕೆ.ಸೀತಾರಾಮ ರೈ ಅವರ ಪುತ್ರ ಡಾ.ರಾಜೇಶ್ ರೈ ಸವಣೂರು ಅವರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ನಡೆಯಿತು. ಸವಣೂರು ಗುತ್ತು ಕುಟುಂಬಸ್ಥರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಆಡಳಿತದಾರ ಸವಣೂರುಗುತ್ತು ರತ್ನಾಕರ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉತ್ಸವ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿ ದಯಾನಂದ ಮಾಲೆತ್ತಾರು, ಪ್ರಧಾನ ಆರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಸೇವಾ ಸಮಿತಿ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು , ಕಾರ್ಯದರ್ಶಿ ರಾಘವ ಗೌಡ ಸವಣೂರು, ಸೇವಾ ಸಮಿತಿ ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಗಂಗಾಧರ ಸುಣ್ಣಾಜೆ, ಗ್ರಾಮದ ದೈವ ಶಿರಾಡಿ ದೈವದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಜ್ವಲ ಕೆ.ಆರ್, ಕಾರ್ಯದರ್ಶಿ ಗಣೇಶ್ ಪಟ್ಟೆ ಮೊದಲಾದವರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group