ಸುಳ್ಯ: ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಸಹಕಾರಿ ನೌಕರರ ಸಂಘದ ನಿರ್ದೇಶಕರಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
15 ನಿರ್ದೇಶನ ಸ್ಥಾನಗಳಿಗೆ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುತ್ತಾರೆ. ಸುಳ್ಯ ತಾಲೂಕಿನಿಂದ ಕೆ.ಟಿ.ವಿಶ್ವನಾಥರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆಂದು ತಿಳಿದು ಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel