ಸಹೃದಯಿಗಳ ಸಹಕಾರದಲ್ಲಿ ನಿರ್ಮಾಣಗೊಂಡ “ಬೆಳಕು” ಹಸ್ತಾಂತರ

August 30, 2019
2:21 PM

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.

Advertisement
Advertisement

ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್‌.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಉದ್ಘಾಟಿಸಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Advertisement

ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group