ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಸರಕಾರ ವಿಫಲ: ಸುಳ್ಯ ಕಾಂಗ್ರೆಸ್

October 15, 2019
3:12 PM

ಸುಳ್ಯ: ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ.

ಒಂದೆಡೆ ಅಧಿಕಾರಿಗಳು ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ ಇನ್ನೊಂದಡೆ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ರೈತರಿಗೂ ಇದು ತಲುಪಿಲ್ಲ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ದುರದೃಷ್ಟಕರ. ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯೂ ಜನರನ್ನು ತಲುಪುತಿಲ್ಲ.2018ರಲ್ಲಿ ಕೇಂದ್ರ ಸರಕಾರದ ಫಸಲ್ ಬೀಮಾ ಯೋಜನೆಯಡಿ ಪ್ರೀಮಿಯಂ ಪಾವತಿಸಿದ ರೈತರಿಗೆ, ವಿಪರೀತ ಮಳೆಯಿಂದಾಗಿ ಫಸಲು ನಷ್ಟ ವಾಗಿದ್ದರೂ ಈ ತನಕ ವಿಮಾ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror