ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

June 13, 2019
8:30 PM

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

Advertisement
Advertisement

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group