ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

June 13, 2019
8:30 PM

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror