ಸುಬ್ರಹ್ಮಣ್ಯ: ಸುನಾದ ಸಂಗೀತೋತ್ಸವ -2019

December 16, 2019
10:02 PM

ಸುಬ್ರಹ್ಮಣ್ಯ: ಸುನಾದ ಸಂಗೀತ ಕಲಾ ಶಾಲೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ನಡೆಸಲ್ಪಡುವ “ಸುನಾದ ಸಂಗೀತೋತ್ಸವ -2019” ಶ್ರೀ ವನದುರ್ಗ ದೇವಿ ಸಭಾಭವನದಲ್ಲಿ ಡಿ.15 ರಂದು ನಡೆಯಿತು. ಸುನಾದದ ಮುಖ್ಯಸ್ಥರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ದೀಪ ಬೆಳಗುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Advertisement
Advertisement

ವಿದ್ಯಾರ್ಥಿಗಳಲ್ಲಿ ಶಿಸ್ತು, ಗುರುಭಕ್ತಿ, ಶ್ರದ್ಧೆ, ಸತತ ಅಭ್ಯಾಸವಿದ್ದರೆ ಮಾತ್ರ ಶಾಸ್ತ್ರೀಯ ಸಂಗೀತದಲ್ಲಿ ಯಶಸ್ಸು. ಭಗವಂತನ ನಾಮಸ್ಮರಣೆಯ ಮೂಲಕ ಭವ ಸಾಗರವನ್ನು ದಾಟುವುದೇ ಸಂಗೀತದ ಉದ್ದೇಶ. ಮೊಬೈಲ್, ಇಂಟರ್ನೆಟ್ ಯುಗದಲ್ಲಿ ನಮ್ಮ ಸಂಸ್ಕೃತಿಗೆ ಧಕ್ಕೆಯಾಗದಂತೆ ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕೆಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಪೋಷಕರಾದ ಶ್ರೀ ಸೋಮಶೇಖರ್, ರೇಖರಾಣಿ, ಸವಿತಾ, ಲತಾ ಸರ್ವೇಶ್ವರ, ಸುಭಾಶಿಣಿ ಶಿವರಾಂ, ಪ್ರತಿಭಾ ಉದಯ ಕುಮಾರ್, ಸಂಧ್ಯಾ ಶ್ರೀನಿವಾಸ್, ಗಂಗಾದೇವಿ, ಅಮೃತವರ್ಷಿಣಿ, ನೀಲಪ್ಪ ಗೌಡ ಉಪಸ್ಥಿತರಿದ್ದರು.

Advertisement

ತದನಂತರ ಸುಬ್ರಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ ನಲ್ಲಿ ಧನಶ್ರೀ ಶಬರಾಯ, ಧನ್ಯಶ್ರೀ, ಶ್ರೀರಾಮ ಕಾಂಚನ, ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಅರವಿಂದ, ಶ್ರೀರಾಮ, ಮೋರ್ಸಿಂಗ್ ನಲ್ಲಿ ಭರತ್ ಕುಮಾರ್ ಇವರು ಸಾಥ್ ನೀಡಿದರು. ಶ್ರೀಮತಿ ರೇಖರಾಣಿ, ಸವಿತಾ ಕಾರ್ಯಕ್ರಮ ನಿರೂಪಿಸಿದರು.

Advertisement

ಸಂಜೆ ಪ್ರಧಾನ ಕಾರ್ಯಕ್ರಮವಾಗಿ ಡಾ. ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಹಾಗೂ ಮೋರ್ಸಿಂಗ್ ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಾಥ್ ನೀಡಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ
Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |
May 7, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror