ಸುಬ್ರಹ್ಮಣ್ಯದ ಆನೆ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ಮಾಡಿದ ಗ್ರಾ ಪಂ ಸದಸ್ಯ…!

August 16, 2019
9:30 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.

ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು  ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್‍ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror