ಸುಬ್ರಾಯ ಚೊಕ್ಕಾಡಿಯವರ ಕಲ್ಲು ಮಂಟಪ ಕವನ ಸಂಕಲನ ಬಿಡುಗಡೆ

June 29, 2020
8:56 PM

ಸುಳ್ಯ: ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿಯವರ  ಕವನ ಸಂಕಲನ ಕಲ್ಲುಮಂಟಪ  ಸೋಮವಾರ ಬಿಡುಗಡೆಯಾಯಿತು. ಸುಬ್ರಾಯ ಚೊಕ್ಕಾಡಿ ಅವರ 80 ನೇ ಹುಟ್ಟುಹಬ್ಬದ ಸಂದರ್ಭ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ  ಕವನಸಂಕಲನ ಬಿಡುಗಡೆ ಮಾಡಲಾಯಿತು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ಪೈಲಾರು ಇವರ ಜಂಟಿ ಸಹಯೋಗದಲ್ಲಿ ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹಗಳ ಬಗ್ಗೆ ಅವಲೋಕನ ಎಂಬ  ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸಲಾಗಿತ್ತು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ಕವನ ಸಂಕಲನ ಕಲ್ಲು ಮಂಟಪ ವನ್ನು ಹಿರಿಯ ಸಾಹಿತಿ, ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಬಿಡುಗಡೆ ಮಾಡಿದರು. ಈ ಸಂದರ್ಭ  ಯುವ ಬರಹಗಾರ-ಶಿಕ್ಷಕ ಅರವಿಂದ ಚೊಕ್ಕಾಡಿ ಹಾಗೂ ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಚಂದ್ರಶೇಖರ ಪೇರಾಲು, ದಯಾನಂದ ಆಳ್ವ, ಮೊದಲಾದವರು ಇದ್ದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror