ಸುಳ್ಯ ತಾಲೂಕಿನಲ್ಲಿ 15 ಸಾವಿರ ಮಂದಿಗೆ ಸಾಲ ಮನ್ನಾ ಹಣ ಬಂದಿದೆ

June 12, 2019
9:00 AM

ಸುಳ್ಯ: ವಾಣಿಜ್ಯ ಬ್ಯಾಂಕ್ ಗಳಲ್ಲಿ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,119 ಮಂದಿಗೆ ಒಟ್ಟು ಸುಳ್ಯ ತಾಲೂಕಿನಲ್ಲಿ 15,202 ಮಂದಿಗೆ ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯ ಒಂದು ಲಕ್ಷ ಹಣ ಸಂದಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಸುಳ್ಯದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳಿದ ರೈತರಿಗೂ ಸಿಗುವಂತೆ ಮಾಡಲು ಕ್ರಮ ಜರುಗಿಸಲು ಮತ್ತು ಖಾತೆಗೆ ನೇರ ಹಣ ಜಮೆ ಆದ ಮಾಹಿತಿಯನ್ನು ರೈತರಿಗೆ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕಂದಾಯ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು ಸಮಸ್ಯೆಗಳನ್ನು ತಿಳಿದು ಕೆಲವೊಂದು ಕಂದಾಯ ಕಾನೂನುಗಳನ್ನು ಸರಳೀಕರಣ ಮಾಡಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು‌ ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಭೂಮಿಯ ಸಾಗುವಳಿ ಮಾಡಿ ಹಕ್ಕು ಪತ್ರ ನೀಡಲಾಗುತ್ತಿದ್ದು 4.38 ಸೆಂಟ್ಸ್ ವರೆಗಿನ ಸ್ಥಳವನ್ನು ರೈತರಿಗೆ ಮಂಜೂರು ಮಾಡಲಾಗುತ್ತಿದೆ. ಹೀಗೆ ಸುಳ್ಯ ತಾಲೂಕಿನಲ್ಲಿ 20 ಸಾವಿರ ಎಕ್ರೆ ಭೂಮಿ ಕೃಷಿಕರಿಗೆ ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದರು.
ಸುಳ್ಯದಲ್ಲಿ 94ಸಿ ಯೋಜನೆಯಲ್ಲಿ ಅತೀ ಹೆಚ್ಚು ಅರ್ಜಿಗಳು ತಿರಸ್ಕಾರಗೊಂಡಿರುವುದು ಕಂಡು ಬರುತಿದೆ. ಇದರ ಮರು ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!
May 1, 2026
11:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror