ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢ ಶಾಲಾ ಕ್ರೀಡಾಕೂಟ ಉದ್ಘಾಟನೆ

October 16, 2019
3:37 PM

ಸುಳ್ಯ:ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಮತ್ತು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯುವ ಸುಳ್ಯ ತಾಲೂಕು ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಕ್ರೀಡಾಕೂಟ ಅ.16 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು. ಕ್ರೀಡಾ ಕೂಟವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.

Advertisement
Advertisement

ಬಾಳಿಲ ಗ್ರಾ.ಪಂ. ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ. ಅಧ್ಯಕ್ಷತೆ ವಹಿಸಿದ್ದರು.ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಧ್ವಜಾರೋಹಣಗೈದರು. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಎಸ್.ಎನ್. ಮನ್ಮಥ, ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಬಾಳಿಲ ಗ್ರಾ.ಪಂ. ಸದಸ್ಯರಾದ ರಾಧಾಕೃಷ್ಣ ರಾವ್ ಯು, ಸರಸ್ವತಿ ಸಿ.ಹೆಚ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ, ರಾಷ್ಟ ಪ್ರಶಸ್ತಿ ಪುರಸ್ಕೃತ ಬಿ.ವಿ. ಶಗ್ರಿತ್ತಾಯ, ಶಾಲಾ ಸಂಚಾಲಕ ಎನ್. ವೆಂಕಟರಮಣ ಭಟ್, ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ, ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಿವರಾಮ ಶಾಸ್ತ್ರಿ ಎಂ.ಎಸ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಚ್ಚುತ ಮಲ್ಕಜೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಲಕೃಷ್ಣ ಪುತ್ಯ, ಜಿಲ್ಲಾ ಗ್ರೇಡ್ 1 ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಯೇನೆಕಲ್ಲು, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಸಂಪಾಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿ ತೇಜಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತುಗಳೊಂದಿಗೆ ವಿದ್ಯಾರ್ಥಿನಿ ಕು. ಅನ್ವಿತಾ ಕ್ರೀಡಾ ಪ್ರತಿಜ್ಞೆ ನೆರವೇರಿಸಿದರು.

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯ ವೈ ಬಿ.‌ಸುಬ್ಬಯ್ಯ ವಂದಿಸಿ ಸಹ ಶಿಕ್ಷಕ ಯಶೋಧರ ನಾರಾಲು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟ ಅ.17ರಂದು ಸಮಾಪನಗೊಳ್ಳಲಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror