ಸುಳ್ಯ ನಗರ ಪಂಚಾಯತ್ ವತಿಯಿಂದ ತ್ಯಾಜ್ಯ ವಿಲೇವಾರಿ ಆರಂಭ

July 2, 2019
10:11 PM

ಸುಳ್ಯ: ಸುಳ್ಯ ನಗರ ಪಂಚಾಯತ್  ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಸವನ್ನು ಇಲ್ಲಿಂದ ತೆರವು ಮಾಡಲಾಗುತಿದೆ. ಇಲ್ಲಿಂದ ಕಸವನ್ನು ಲಾರಿಯಲ್ಲಿ ತುಂಬಿ ಬೇರೆ ಕಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುತಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಸವನ್ನು ನಗರ ಪಂಚಾಯತ್ ಕಚೇರಿ ಸಮೀಪವೇ ತುಂಬಿಡುವುದರಿಂದ ದುರ್ನಾತ ಬೀರುತ್ತಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು.

Advertisement
Advertisement

 

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group