ಸುಳ್ಯ ನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ- 52 ಪ್ರಕರಣ ದಾಖಲು

December 17, 2019
7:13 PM

ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.

Advertisement
Advertisement

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group