ಸುಳ್ಯ: ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಮುಂಗಾರು ಕ್ರೀಡಾಕೂಟ

August 16, 2019
1:55 PM

ಸುಳ್ಯ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ (ಎಸ್.ಕೆ.ಪಿ.ಎ)ಜಿಲ್ಲಾ ವಾರ್ಷಿಕ ಕ್ರೀಡಾಕೂಟ ಆ.18 ರಂದು ಸುಳ್ಯ ಮಹಾತ್ಮಾ ಗಾಂಧಿ ಮಲ್ನಾಡ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುಬ್ರಹ್ಮಣ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಅಸೋಸಿಯೇಶನ್ ನ ಸುಳ್ಯ ವಲಯದ ಆಶ್ರಯದಲ್ಲಿ ನಡೆಯುವ ಈ ಮುಂಗಾರು ಕ್ರೀಡಾಕೂಟವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ಎಸ್.ಕೆ.ಪಿ.ಎ ಅಧ್ಯಕ್ಷ ವಿಲ್ಸನ್ ಗೋನ್ಸಾಲ್ವಿಸ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಅಂಗಾರ, ಎಸ್.ಕೆ.ಪಿ.ಎ. ಸಂಚಾಲಕ ವಿಠಲ ಚೌಟ, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಲಯನ್ಸ್ ಕ್ಲಬ್ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ ಭಾಗವಹಿಸಲಿದ್ದಾರೆ.

ಇದೇ ವೇಳೆ ಅಂತರಾಷ್ಟ್ರೀಯ ಕರಾಟೆ ಪಟು ಪ್ರತೀಕ್ ದೇವ, ರಾಷ್ಟ್ರಮಟ್ಟದ ವೇಟ್ ಲಿಪ್ಟರ್ ಲಾವಣ್ಯ ಆರ್ ರೈ ಅವರನ್ನು ಸನ್ಮಾನಿಸಲಾಗುವುದು. ಉದ್ಘಾಟನೆಗೆ ಮುನ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಕ್ರೀಡಾ ಕೂಟದ ಮೆರವಣಿಗೆ ನಡೆಯಲಿದೆ. ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಉದ್ಘಾಟಿಸುವರು. ಸಂಘದ ಸದಸ್ಯರಿಗೆ ಮತ್ತು ಕುಟುಂಬದವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಪಿ.ಎ ಮಾಜಿ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣ ಸುಳ್ಯ, ಸುಳ್ಯ ವಲಯ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ಗೌರವಾಧ್ಯಕ್ಷ ಬಾಲಕೃಷ್ಣ ಗುತ್ತಿಗಾರು, ಉಪಾಧ್ಯಕ್ಷರಾದ ಅನುರಾಜ್ ಪಂಜ, ದಿವಾಕರ ಮುಂಡೋಡಿ, ಕ್ರೀಡಾ ಕಾರ್ಯದರ್ಶಿ ರತೀಶ್ ಬೆಳ್ಳಾರೆ, ದಿನೇಶ್ ಏನೆಕಲ್ಲು, ಹರೀಶ್ ಸುಳ್ಯ ಉಪಸ್ಥಿತರಿದ್ದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group