ಸುಳ್ಯ ಬಿಜೆಪಿಯಲ್ಲಿ ಸಂಘಟನಾ ಪರ್ವ ಆರಂಭ

September 26, 2019
8:30 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.

ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror