ಸುಳ್ಯ ಬಿಜೆಪಿಯಲ್ಲಿ ಸಂಘಟನಾ ಪರ್ವ ಆರಂಭ

September 26, 2019
8:30 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.

ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror