ಸುಳ್ಯ: ರಂಗಮನೆ ಪ್ರಶಸ್ತಿಗೆ ಪುರುಷೋತ್ತಮ ತಲವಾಟ ಆಯ್ಕೆ

February 5, 2020
12:55 PM

ಸುಳ್ಯ :ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ನೀಡುವ 2020 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಂಗ ತಾಂತ್ರಿಕತಜ್ಞ ಪುರುಷೋತ್ತಮ ತಲವಾಟರನ್ನು ಆಯ್ಕೆ ಮಾಡಲಾಗಿದೆ ಎಂದು ರಂಗಮನೆ ಅಧ್ಯಕ್ಷರಾದ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement

ದೃಶ್ಯಕಲೆಯಲ್ಲಿ ಪದವಿ ಪಡೆದ ಪುರುಷೋತ್ತಮ ತಲವಾಟರವರು ಕಳೆದ 45 ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡವರು. ರಾಜ್ಯ ಹೊರರಾಜ್ಯಗಳಲ್ಲಿ ಅನೇಕ ಪ್ರಮುಖ ನಾಟಕಗಳನ್ನು ನಿರ್ದೇಶಿಸಿದ್ದು ಮಾತ್ರವಲ್ಲ; ದೇಶದ ಪ್ರಸಿದ್ಧ ರಂಗನಿರ್ದೇಶಕರ ನಾಟಕಗಳಿಗೆ ರಂಗಸಜ್ಜಿಕೆ, ರಂಗ ಪರಿಕರ, ವಸ್ತ್ರವಿನ್ಯಾಸ, ಬೆಳಕು ಸಂಯೋಜನೆ, ಪ್ರಸಾಧನ.. ಮುಂತಾಗಿ ರಂಗಭೂಮಿಯ ಸರ್ವ ತಾಂತ್ರಿಕ ವರ್ಗದಲ್ಲಿ ದುಡಿದ ಅಪರೂಪದ ರಂಗಕರ್ಮಿಯಾಗಿದ್ದಾರೆ.

ನಾಟಕ ಮಾತ್ರವಲ್ಲದೆ ಅನೇಕ ಚಲನಚಿತ್ರ, ಟಿ.ವಿ.ಧಾರವಾಹಿಗಳಲ್ಲೂ ಅಭಿನಯಿಸಿದ್ದಾರೆ. ಹೆಗ್ಗೋಡು, ಬಿಜಾಪುರ, ಸಾಗರ, ಮಂಡ್ಯ ಮುಂತಾದೆಡೆಯ ಅನೇಕ ರಂಗಮಂದಿರಗಳಿಗೆ ಪ್ರತಿಧ್ವನಿ ನಿವಾರಣೆ ಮತ್ತು ಶಾಶ್ವತ ಬೆಳಕಿನ ವಿನ್ಯಾಸ ಮಾಡಿದ ರಾಜ್ಯದ ವಿಶೇಷ ತಾಂತ್ರಿಕ ತಜ್ಞರಿವರು. ನೀನಾಸಂ ರಂಗ ಶಿಕ್ಷಣ ಕೇಂದ್ರ, ರಾಜ್ಯದ ಎಲ್ಲ ರಂಗಾಯಣಗಳು, ಆಳ್ವಾಸ್ ರಂಗ ಶಿಕ್ಷಣ ಕೇಂದ್ರ ಮುಂತಾದೆಡೆ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದಾರೆ. ಪಾಂಡಿಚೇರಿ, ಮಧುರೈ, ಬೆಂಗಳೂರು, ಪಣಜಿ ಸೇರಿದಂತೆ ದೇಶದ ನೂರಕ್ಕೂ ಹೆಚ್ಚು ಕಡೆಗಳಲ್ಲಿ
ಪ್ರಸಾಧನ ಮತ್ತು ಮುಖವಾಡ ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರತಿಷ್ಠಿತ ಚಮನ್ ಲಾಲ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಸನ್ಮಾನಗಳು ಇವರಿಗೆ ಲಭಿಸಿವೆ.
ಇದೀಗ ರಂಗಮನೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು ರೂ:ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ಮಾರ್ಚ್ 1 ರಂದು ರಂಗಮನೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದ ಸಮಾರೋಪದಂದು ನೀಡಲಾಗುವುದೆಂದು ಜೀವನ್ ರಾಂ ತಿಳಿಸಿದ್ದಾರೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ
ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಮಂಡ್ಯ : ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ  ವಿತರಿಸುವಂತೆ ಜಿಲ್ಲಾಧಿಕಾರಿ ಸೂಚನೆ
July 22, 2025
7:34 AM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಿನ್ನೆಲೆ | ಕಾಫಿ ಬೆಳೆಗಾರರಿಗೆ ಸಂಕಷ್ಟ
July 21, 2025
11:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group