ಸುಳ್ಯ: ರಂಗಮನೆ ಪ್ರಶಸ್ತಿಗೆ ಪುರುಷೋತ್ತಮ ತಲವಾಟ ಆಯ್ಕೆ

February 5, 2020
12:55 PM

ಸುಳ್ಯ :ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ನೀಡುವ 2020 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಂಗ ತಾಂತ್ರಿಕತಜ್ಞ ಪುರುಷೋತ್ತಮ ತಲವಾಟರನ್ನು ಆಯ್ಕೆ ಮಾಡಲಾಗಿದೆ ಎಂದು ರಂಗಮನೆ ಅಧ್ಯಕ್ಷರಾದ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

ದೃಶ್ಯಕಲೆಯಲ್ಲಿ ಪದವಿ ಪಡೆದ ಪುರುಷೋತ್ತಮ ತಲವಾಟರವರು ಕಳೆದ 45 ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡವರು. ರಾಜ್ಯ ಹೊರರಾಜ್ಯಗಳಲ್ಲಿ ಅನೇಕ ಪ್ರಮುಖ ನಾಟಕಗಳನ್ನು ನಿರ್ದೇಶಿಸಿದ್ದು ಮಾತ್ರವಲ್ಲ; ದೇಶದ ಪ್ರಸಿದ್ಧ ರಂಗನಿರ್ದೇಶಕರ ನಾಟಕಗಳಿಗೆ ರಂಗಸಜ್ಜಿಕೆ, ರಂಗ ಪರಿಕರ, ವಸ್ತ್ರವಿನ್ಯಾಸ, ಬೆಳಕು ಸಂಯೋಜನೆ, ಪ್ರಸಾಧನ.. ಮುಂತಾಗಿ ರಂಗಭೂಮಿಯ ಸರ್ವ ತಾಂತ್ರಿಕ ವರ್ಗದಲ್ಲಿ ದುಡಿದ ಅಪರೂಪದ ರಂಗಕರ್ಮಿಯಾಗಿದ್ದಾರೆ.

Advertisement

ನಾಟಕ ಮಾತ್ರವಲ್ಲದೆ ಅನೇಕ ಚಲನಚಿತ್ರ, ಟಿ.ವಿ.ಧಾರವಾಹಿಗಳಲ್ಲೂ ಅಭಿನಯಿಸಿದ್ದಾರೆ. ಹೆಗ್ಗೋಡು, ಬಿಜಾಪುರ, ಸಾಗರ, ಮಂಡ್ಯ ಮುಂತಾದೆಡೆಯ ಅನೇಕ ರಂಗಮಂದಿರಗಳಿಗೆ ಪ್ರತಿಧ್ವನಿ ನಿವಾರಣೆ ಮತ್ತು ಶಾಶ್ವತ ಬೆಳಕಿನ ವಿನ್ಯಾಸ ಮಾಡಿದ ರಾಜ್ಯದ ವಿಶೇಷ ತಾಂತ್ರಿಕ ತಜ್ಞರಿವರು. ನೀನಾಸಂ ರಂಗ ಶಿಕ್ಷಣ ಕೇಂದ್ರ, ರಾಜ್ಯದ ಎಲ್ಲ ರಂಗಾಯಣಗಳು, ಆಳ್ವಾಸ್ ರಂಗ ಶಿಕ್ಷಣ ಕೇಂದ್ರ ಮುಂತಾದೆಡೆ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದಾರೆ. ಪಾಂಡಿಚೇರಿ, ಮಧುರೈ, ಬೆಂಗಳೂರು, ಪಣಜಿ ಸೇರಿದಂತೆ ದೇಶದ ನೂರಕ್ಕೂ ಹೆಚ್ಚು ಕಡೆಗಳಲ್ಲಿ
ಪ್ರಸಾಧನ ಮತ್ತು ಮುಖವಾಡ ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರತಿಷ್ಠಿತ ಚಮನ್ ಲಾಲ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಸನ್ಮಾನಗಳು ಇವರಿಗೆ ಲಭಿಸಿವೆ.
ಇದೀಗ ರಂಗಮನೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು ರೂ:ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ಮಾರ್ಚ್ 1 ರಂದು ರಂಗಮನೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದ ಸಮಾರೋಪದಂದು ನೀಡಲಾಗುವುದೆಂದು ಜೀವನ್ ರಾಂ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror