ಸುಳ್ಯ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ವರ್ಗಾವಣೆ

October 26, 2019
10:10 AM

ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತ ವಾರ್ತೆಯ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಆಗಮಿಸಲಿದ್ದಾರೆ. ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ರೌಡಿ ನಿಗ್ರಹ ದಳ ಮತ್ತಿತರ ವಿಭಾಗದಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.

Advertisement

ಆರ್.ಸತೀಶ್ ಕುಮಾರ್ ಎರಡೂವರೆ ವರ್ಷಕ್ಕಿಂತಲೂ ಹೆಚ್ಚು ಸಮಯ ಸುಳ್ಯ ವೃತ್ತ ನಿರೀಕ್ಷಕರಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group