ಸುಳ್ಯ ಶಾಸಕರಿಗೆ ಸಚಿವ ಸ್ಥಾನ- ಆದಿ ದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ

August 27, 2019
10:02 PM

ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ‌.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ‌‌ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ‌ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ‌ ಇತರ ಶಾಸಕರು, ಮುಖಂಡರು ಕೂಡಾ‌ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror