ಸುಳ್ಯ ಶಿವಳ್ಳಿ ಸಾಂಸ್ಕೃತಿಕ ಸಂಭ್ರಮ, ಸನ್ಮಾನ

November 5, 2019
6:00 PM

ಸುಳ್ಯ: ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಶಿವಳ್ಳಿ ಬಾಂಧವರಿಂದ ನೃತ್ಯ, ಹಾಡು, ನಾಟಕ, ಯಕ್ಷಗಾನ ಮೊದಲಾದ ವೈವಿಧ್ಯಮಯ ಕಾರ್ಯಕ್ರಮ ಇಲ್ಲಿನ ಶ್ರೀಗುರು ರಾಘವೇಂದ್ರ ಮಠದ ಆವರಣದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ ವಹಿಸಿ ಕಲಾವಿದರಿಗೆ ಶುಭ ಹಾರೈಸಿದರು. ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಬಿರಾಮ ಸುಳ್ಯ ಅವರನ್ನು ಪತ್ರಕರ್ತ ಗಂಗಾಧರ ಮಟ್ಟಿ ಸಮ್ಮಾನಿಸಿ, ಪಟ್ಟಾಭಿ ಅವರ ಪ್ರತಿಭೆ ಇದೀಗ ರಾಜ್ಯವ್ಯಾಪಿ ಹರಡಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಇವರಿಗೆ ಮುಂದೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ದೊರೆಯಲಿ ಎಂದು ಅಭಿನಂದಿಸಿದರು. ಸುಮತಿ ಪಟ್ಟಾಭಿ ಅವರನ್ನು ಪುರಸ್ಕರಿಸಲಾಯಿತು.

ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ ಸ್ವಾಗತಿಸಿ, ಹರಿಕೃಷ್ಣ ನಾವಡ ವಂದಿಸಿದರು. ಸೌಮ್ಯ ಸೋಮಯಾಗಿ ಸಮ್ಮಾನ ಪತ್ರ ವಾಚಿಸಿದರು. ಸುಳ್ಯ, ಸುಬ್ರಹ್ಮಣ್ಯ ಮತ್ತು ಪಂಜದ ಶಿವಳ್ಳಿ ಘಟಕದ ಸದಸ್ಯರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror