ಸುಳ್ಯ ಶಿವಳ್ಳಿ ಸಾಂಸ್ಕೃತಿಕ ಸಂಭ್ರಮ, ಸನ್ಮಾನ

November 5, 2019
6:00 PM

ಸುಳ್ಯ: ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಶಿವಳ್ಳಿ ಬಾಂಧವರಿಂದ ನೃತ್ಯ, ಹಾಡು, ನಾಟಕ, ಯಕ್ಷಗಾನ ಮೊದಲಾದ ವೈವಿಧ್ಯಮಯ ಕಾರ್ಯಕ್ರಮ ಇಲ್ಲಿನ ಶ್ರೀಗುರು ರಾಘವೇಂದ್ರ ಮಠದ ಆವರಣದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ ವಹಿಸಿ ಕಲಾವಿದರಿಗೆ ಶುಭ ಹಾರೈಸಿದರು. ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಬಿರಾಮ ಸುಳ್ಯ ಅವರನ್ನು ಪತ್ರಕರ್ತ ಗಂಗಾಧರ ಮಟ್ಟಿ ಸಮ್ಮಾನಿಸಿ, ಪಟ್ಟಾಭಿ ಅವರ ಪ್ರತಿಭೆ ಇದೀಗ ರಾಜ್ಯವ್ಯಾಪಿ ಹರಡಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಇವರಿಗೆ ಮುಂದೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ದೊರೆಯಲಿ ಎಂದು ಅಭಿನಂದಿಸಿದರು. ಸುಮತಿ ಪಟ್ಟಾಭಿ ಅವರನ್ನು ಪುರಸ್ಕರಿಸಲಾಯಿತು.

ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ ಸ್ವಾಗತಿಸಿ, ಹರಿಕೃಷ್ಣ ನಾವಡ ವಂದಿಸಿದರು. ಸೌಮ್ಯ ಸೋಮಯಾಗಿ ಸಮ್ಮಾನ ಪತ್ರ ವಾಚಿಸಿದರು. ಸುಳ್ಯ, ಸುಬ್ರಹ್ಮಣ್ಯ ಮತ್ತು ಪಂಜದ ಶಿವಳ್ಳಿ ಘಟಕದ ಸದಸ್ಯರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror