ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

August 19, 2019
12:30 PM

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

Advertisement
Advertisement

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group