ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಎಸ್.ಅಂಗಾರ ಪ್ಲಾಗ್ ಆಪ್ ಮಾಡಿ ಆಂಬುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್ ಆರ್ಥಿಕ ನೆರವಿನಿಂದ ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದ್ದು, ಒಂದು ಸುಳ್ಯ ಆಸ್ಪ್ರತ್ರೆಗೆ ನೀಡಲಾಗಿದೆ. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಕರುಣಾಕರ, ಡಾ.ಹಿಮಕರ, ತಾಲೂಕು ಆರೋಗ್ಯಮಿತ್ರ ಮುರಳಿ ನಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ,,ಚಂದ್ರಶೇಖರ ಪನ್ನೆ, ದಾಮೋದರ ಮಂಚಿ, ಕುಶಾಲಪ್ಪ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel