ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

October 3, 2019
9:31 AM

ಸುಳ್ಯ:ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ. 2 ರಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗಾಂಧಿ ಜಯಂತಿ ಆಚರಣೆ ನಡೆಯಿತು. ಗಾಂಧಿ ಚಿಂತನವನ್ನು ನಡೆಸಿ ಕೊಟ್ಟ ಹಿಂದಿ ವಿಭಾಗದ ಮುಖ್ಯಸ್ಥರಾದ ರಾಮಕೃಷ್ಣ ಕೆ.ಎಸ್. ಅವರು, ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಗಾಂಧಿ ಚಿಂತನೆಗಳ ಬಗೆಗಿನ ಒಲವು ಕಡಿಮೆಯಾಗುತ್ತಿದೆ ಹಾಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅವರು ಮಾತನಾಡಿ, ಯುವಜನತೆಯಲ್ಲಿ ಗಾಂಧಿಜಿಯವರ ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸುವ ಕೆಲಸವಾಗಬೇಕು ಎಂದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸತೀಶ್ ಕುಮಾರ್ ಕೆ. ಆರ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಯೋಜನಾಧಿಕಾರಿಗಳಾದ ಶ್ರೀಮತಿ ಸುರೇಖಾ ಹೆಚ್, ಹಾಗೂ ಧನರಾಜ್ ಕುಮಾರ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಮಿತಾ ನಿರೂಪಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೊಡಿಯಾಲಬೈಲಿನಿಂದ ಸುಳ್ಯದ ವರೆಗಿನ ರಸ್ತೆಯ ಬದಿಯ ಸ್ವಚ್ಛತೆ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group