ಸುಳ್ಯಕ್ಕೆ ಮತ್ತೆ ವಕ್ಕರಿಸಿದ ಕೋವಿಡ್ | ಸುಳ್ಯ ಸರಕಾರಿ ಆಸ್ಪತ್ರೆ ಸಂಪೂರ್ಣ ಸೀಲ್ ಡೌನ್

July 9, 2020
10:05 AM

ಸುಳ್ಯ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 48 ಗಂಟೆಗಳ ಬಳಿಕ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಿ ಬಳಿಕ ತೆರೆಯಲಾಗುವುದು ಎಂದು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆ.ವಿ.ಕರುಣಾಕರ ತಿಳಿಸಿದ್ದಾರೆ.

Advertisement

ಸುಳ್ಯ ಸರಕಾರಿ ಆಸ್ಪತ್ರೆಯಿಂದ ಪರೀಕ್ಷೆಗೆ ಕಳುಹಿಸಿದ 32 ಮಾದರಿಯಲ್ಲಿ 6 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಒಬ್ಬರು ವೈದ್ಯರು, ಒಬ್ಬರು ನರ್ಸಿಂಗ್ ಸಿಬ್ಬಂದಿ, 3 ಡಯಾಲಿಸಿಸ್ ಸಿಬ್ಬಂದಿ ಮತ್ತು ಒಬ್ಬರು ರೋಗಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗೆ ಮತ್ತು ಈ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು‌. ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಯ ತೀವ್ರ ನಿಗಾ ಘಟಕ ಮತ್ತು ಡಯಾಲಿಸಿಸ್ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರಿಗೆ ಮತ್ತು ದಾದಿಯರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ‌.
ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ತುರ್ತು ಚಿಕಿತ್ಸಾ ವಿಭಾಗ ಸೇರಿ ಎಲ್ಲಾ ವಿಭಾಗವನ್ನೂ ಮುಚ್ಚಲಾಗುವುದು. ಒಳ ರೋಗಿಗಳ ಚಿಕಿತ್ಸೆ ಮಾತ್ರ ಎಂದಿನಂತೆ ನಡೆಯಲಿದೆ. ಅವರಿಗೆ ಚಿಕಿತ್ಸೆ ನೀಡಲು ಒಬ್ಬರು ವೈದ್ಯರು ಮತ್ತು ಕೆಲ ಮಂದಿ ನರ್ಸಿಂಗ್ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. 48 ಗಂಟೆಗಳ ಬಳಿಕ ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಶನಿವಾರದಿಂದ ಆಸ್ಪತ್ರೆ ಮತ್ತೆ ತೆರೆದು ಕಾರ್ಯಾಚರಿಲಿದೆ ಎಂದು ಡಾ.ಕರುಣಾಕರ ತಿಳಿಸಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group