ಸುಳ್ಯಕ್ಕೆ ಸಚಿವ ಸ್ಥಾನ : ಜನತೆಯ ಪಕ್ಷಾತೀತ ಒಕ್ಕೊರಲ ಆಗ್ರಹವಾಗಿತ್ತು

August 20, 2019
10:35 AM

ಸುಳ್ಯ: ಶುದ್ದ ಹಸ್ತರೆಂದು ಜನಜನಿತ ಮಾನ್ಯ ಹಿರಿಯ ಶಾಸಕರಾದ ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡದೇ ಇರುವುದು ಅಮರ ಸುಳ್ಯದ 70 ವರ್ಷದ ಮೀಸಲು ಕ್ಷೇತ್ರದಲ್ಲಿ ಸತತವಾಗಿ 27 ವರ್ಷ ಅವಧಿಗೆ ಬೆಂಬಲಿಸಿದ ಜನತೆಗೆ, ಶೋಷಿತರಿಗೆ ಮಾಡಿದ ಅನ್ಯಾಯ ಹಾಗೂ ಅವಮಾನ. ಜನರು ಇಟ್ಟಿರುವ ಸುಧೀರ್ಘ ಅದಮ್ಯ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ಆಮ್ ಆದ್ಮಿ ಪಕ್ಷ ,ಯುವ ಘಟಕ (AYW) ಮತ್ತು ವಿದ್ಯಾರ್ಥಿ ಘಟಕ (CYSS)ದ ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

ಸಚಿವ ಸ್ಥಾನ ಸುಳ್ಯದ ಜನತೆಯ ಪಕ್ಷಾತೀತ ಒಕ್ಕೊರಲ ಆಗ್ರಹವು ಆಗಿತ್ತು.ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದು. ವಿರೋಧಿ ಪಕ್ಷಗಳ ಸರಕಾರಗಳು ನಿರ್ಲಕ್ಷ್ಯ ಮಾಡಿರುವ ಸಹಜ ರಾಜಕೀಯ ಪರಿಸ್ಥಿತಿಯು ಕಾರಣವಾಗಿತ್ತು . ಇಂತಹ ಸಂದರ್ಭಗಳಲ್ಲಿ ತನ್ನದೆ ಪಕ್ಷದ ಸರಕಾರದಿಂದ ಸಚಿವರಾಗಿ, ಸುಳ್ಯ ನಗರವನ್ನು ಪುರಸಭೆ ಪರಿವರ್ತನೆ, ಇಲ್ಲಿನ ಶಾಶ್ವತ ಕುಡಿಯುವ ನೀರಿನ ಯೋಜನೆ, ಪಯಸ್ವಿನಿ ಹೊಳೆಗೆ ಕಿಂಡಿ ಅಣೆಕಟ್ಟು, ಯೋಜಿತ ರಬ್ಬರ್ ಕಾರ್ಖಾನೆ ಚಾಲನೆ, ಇಲ್ಲಿನ ಪ್ರಾಕೃತಿಕ ಪರಿಸರದ ಹದಗೆಟ್ಟ ಗ್ರಾಮೀಣ ರಸ್ತೆಗೆ ಕಾಯಕಲ್ಪ, ನೂತನ ಕಡಬ ತಾಲೂಕಿಗೆ ಪ್ರಾಶಸ್ತ್ಯ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಮತ್ತಷ್ಟು ಅನುದಾನ, ಕೃಷಿ ಪ್ರಧಾನ ಆಧಾರಿತ ಕೈಗಾರಿಕೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ಅಭಿವೃದ್ಧಿ , ಹಾಲಿ ಸರಕಾರಿ ಶಿಕ್ಷಣದ ಕಾಲೇಜುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಇತ್ಯಾದಿಗಳನ್ನು ಕಾರ್ಯರೂಪಕ್ಕೆ ತರಲು ಸಹಕಾರಿ ಎಂಬುದು ಜನಸಾಮಾನ್ಯರ ಅಪೇಕ್ಷೆಯಾಗಿದೆ.

ಆದಾಗ್ಯೂ ಎರಡನೇ ಹಂತದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನ ದೊರೆತು ಸುಳ್ಯ, ಕಡಬದ ಜೊತೆಗೆ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಸುಳ್ಯದ ಶಾಸಕರು ಗೌರವಕ್ಕೆ ಪಾತ್ರರಾಗಲಿ ಎಂಬುದಾಗಿ ಪಕ್ಷಾತೀತವಾಗಿ ಜನತೆ ಬಯಸಿದ್ದಾರೆ.

 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group