ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

August 13, 2019
9:15 PM

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror