ಸುಳ್ಯದ ನಿಷ್ಠಾವಂತ ಶಾಸಕ ಅಂಗಾರರ ಕಡೆಗಣನೆ: ಧರ್ಮಪಾಲ ಗೌಡ ಕೊಯಿಂಗಾಜೆ

August 20, 2019
12:09 PM

ಸುಳ್ಯ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಕಡೆಗಣಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ನೈತಿಕತೆ ಕಳೆದುಕೊಂಡಿದೆ. ಆ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಿ ಎಂದು ಬಯಸುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ: ಶರೀಫ್ ಕಂಠಿ

ನಮ್ಮ ಸುಳ್ಯದ ಶಾಸಕ ಅಂಗಾರರವರು ಸಚಿವರಾಗಿ ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ ಬಿಜೆಪಿ ಸರಕಾರ ನಿಷ್ಠಾವಂತರಿಗೆ ಅವಕಾಶ ಕೊಡುವುದಿಲ್ಲ.ಭ್ರಷ್ಟರಿಗೆ ಮಣೆ ಹಾಕುತ್ತಾರೆ.ಯಾವಾಗ ನಮ್ಮ ನಗರ ಸುಂದರ ನಗರವಾಗುವುದು ಎಂದು ನಗರ ಪಂಚಾಯತ್ ಸದಸ್ಯ  ಶರೀಪ್ ಕಂಠಿ ಪ್ರತಿಕ್ರಿಯೆ ನೀಡಿದ್ದಾರೆ.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror